ಮಲಗಿದಲ್ಲೇ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌ ; ಪತಿಯನ್ನೇ ಕತ್ತು ಹಿಸುಕಿ ಕೊಲೆಮಾಡಿದ ಕಿರಾತಕಿ.

ಮಲಗಿದಲ್ಲೇ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌ ; ಪತಿಯನ್ನೇ ಕತ್ತು ಹಿಸುಕಿ ಕೊಲೆಮಾಡಿದ ಕಿರಾತಕಿ.

ವಿಟ್ಲ: ಕೋಣೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ.

ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ ಮೃತಪಟ್ಟ ವ್ಯಕ್ತಿಯಾಗಿದ್ದು, ಅರವಿಂದ ಅವರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ.

ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ ಗೌಡ ಎಂಬವರು ನಿರ್ವಹಿಸುತ್ತಿದ್ದು, ಈ ಮೂಲಕ ಭಾಸ್ಕರ ಅವರ ಪತಿಗೆ ಪರಿಚಯವಾದ ಯೋಗೀಶ್ ಗೌಡ ಆಶಾಳೊಂದಿಗೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದಾನೆ. ಅರವಿಂದ ಭಾಸ್ಕರನು ಅವರ ಅಡಿಕೆ ತೋಟದ ಅಡಿಕೆಯನ್ನು ತೆಗದುಕೊಂಡು ಹೋಗಿ ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಶಾಳು ಆಕ್ಷೇಪಿಸುತ್ತಿರುವುದಲ್ಲದೇ ಕೆಲವೊಂದು ಬಾರಿ ಯೋಗೀಶನು ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದನು. ಇದರಿಂದ ಹೆದರಿ ರಾತ್ರಿ ವೇಳೆಯಲ್ಲಿ ಆತನ ಮನೆಯ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿ ಮಲಗುತ್ತಿದ್ದನು.‌ ಬಗ್ಗೆ ಸುಮಾರು 1 ತಿಂಗಳ ಹಿಂದೆಯೇ ದೂರುದಾರರಿಗೆ ತಿಳಿಸಿರುತ್ತಾರೆ.
ಫೆ. 26ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ತಂದೆಯವರಿಗೆ ಕರೆ ಮಾಡಿದ ಆಶಾ, ಪತಿ ನಿನ್ನೆ ರಾತ್ರಿ 10 ಗಂಟೆಗೆ ಕೋಣೆಯಲ್ಲಿ ಮಲಗಿದ್ದು, ಬೆಳಗ್ಗಿನ ಜಾವ 7.30 ಸುಮಾರಿಗೆ ನೋಡುವಾಗ ಪತಿ ಏಳುತ್ತಿಲ್ಲ, ಮನೆಗೆ ಬನ್ನಿ ಎಂದು ತಿಳಿಸಿದ್ದಾಳೆ. ಬಳಿಕ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದ ವಿಚಾರ ತಿಳಿದು ಅಲ್ಲಿಗೆ ಹೋದಾಗ ವೈದ್ಯರು ಅರವಿಂದ ಭಾಸ್ಕರನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೃತದೇಹದ ಸ್ಥಿತಿಗತಿಯನ್ನು ಪರಿಶೀಲಿಸಿದಾಗ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ ಎಂದು ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ರಘುನಾಥ ಎಂಬವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ

ರಾಜ್ಯ