ನಾಲ್ಕೂರಿನಲ್ಲಿ ದಲಿತ ನಿವಾಸಿಗಳ ಮನೆಗಳಿಗೆ ತೆರಳುವ ರಸ್ತೆಯಲ್ಲಿ ಸ್ಥಳೀಯ ವ್ಯಕ್ತಿಯಿಂದ ಕಂದಕ ನಿರ್ಮಾಣ : ಪ್ರತಿಭಟನೆ.


ಸುಳ್ಯ ತಾಲೂಕು ನಾಲ್ಕೂರು ಗ್ರಾಮದ ದಲಿತ ನಿವಾಸಿಗಳು ವಾಸಿಸುತ್ತಿದ್ದ ಮನೆಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಸ್ಥಳಿಯ ವ್ಯಕ್ತಿ ಕಂದಕ ನಿರ್ಮಿಸಿದ್ದಾರೆ .ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಮತ್ತು ವಿವಿಧ ದಲಿತ ಸಂಘಟನೆಯ ಮುಖಂಡರು ಇಂದು ಸುಳ್ಯ ತಾಲೂಕು ಕಚೇರಿ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದ್ದಾರೆ,

ನಲವತ್ತು ವರ್ಷಗಳಿಂದ ದಲಿತ ಕುಟುಂಬಗಳು ಇದೇ ರಸ್ತೆ ಬಳಸುತ್ತಿದ್ದು ಇದೀಗ ಏಕಾಏಕಿ ರಸ್ತೆಯಲ್ಲಿ ಕಂದಕ ನಿರ್ಮಾಣ ಮಾಡಿದ್ದಾರೆ.15 ದಿನಗಳ ಹಿಂದೆ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಯರಿಗೆ ಮತ್ತು ಸುಳ್ಯ ತಹಶೀಲ್ದಾರರಿಗೂ ಮನವಿಯನ್ನು ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ಸಾಂಕೇತಿಕವಾಗಿ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ನಮ್ಮ ಬೇಡಿಕೆಗೆ ಸ್ಪಂದನೆ ನೀಡದಿದ್ದಲ್ಲಿ ನಾವೇ ಮುಂದಾಗಿ ಕಂದಕವನ್ನು ಮುಚ್ಚುವ ಕೆಲಸವನ್ನು ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆ ಮತ್ತು ದಲಿತ ಸಮುದಾಯದ ಹೆಚ್ಚಿನ ಬಾಂಧವರನ್ನು ಸೇರಿಸಿ ಬೃಹತ್ ಪ್ರತಿಭಟನೆ ಮಾಡಲಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಹೇಳಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ ಚಂದ್ರಕಾಂತ್ ಸಂಘಟನೆಯ ಮುಖಂಡರಿಂದ ಮನವಿಯನ್ನು ಸ್ವೀಕರಿಸಿ ತಾವು ನೀಡಿದ ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ನೀಡುವ ಭರವಸೆಯನ್ನು ನೀಡಿದ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದುಕೊಂಡರು.

ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಕಾರ್ಯದರ್ಶಿ ಪರಮೇಶ್ವರ ಕೆಮ್ಮಿಂಜೆ, ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕೊಡಂಕಿರಿ, ದಲಿತ ಸಂಘಟನೆಯ ಜಿಲ್ಲಾ ಮುಖಂಡರಾದ ವಿಶ್ವನಾಥ ಅಲೆಕ್ಕಾಡಿ, ಅಚ್ಚುತ ಮಲ್ಕಜೆ, ಸೀನ ಬಾಳಿಲ, ಸ್ಥಳೀಯ ಛತ್ರಪ್ಪಾಡಿ ದಲಿತ ನಿವಾಸಿಗಳಾದ ಕುಂಞಪ್ಪ,ಚನ್ನು,ಸುಂದರಿ, ನೇತ್ರಾವತಿ,ಅರುಣ,ವಸಂತ, ರಾಮಚಂದ್ರ,ತೀರ್ಥರಾಮ ಮೊದಲಾದವರು ಪಾಲ್ಗೊಂಡಿದ್ದರು