ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ.

ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ.

ದಿ‌.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆಯನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ
ನಳಿನ್ ಕುಮಾರ್ ಕಟೀಲು ಹಾಗು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಜಂಟಿಯಾಗಿ ನೆರವೇರಿಸಿದರು. ಈ ಸಂಧರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಇಂದಿರಾ ಬಿ.ಕೆ‌.,ಜಗದೀಶ್ ಅಧಿಕಾರಿ ಸೇರಿದಂತೆ ಪ್ರಮುಖರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ರಾಜ್ಯ