

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ದುಷ್ಕರ್ಮಿಯಿಂದ ಚೂರಿ ಇರಿತಕ್ಕೆ ಒಳಗಾಗಿದ ಯುವತಿ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.ಎಂದು ತಿಳಿದು ಬಂದಿದೆ ವಿಟ್ಲ ಸಮೀಪದ ಅಳಿಕೆ ಗ್ರಾಮದ ಆದಾಳ ನಿವಾಸಿ ಗೌರಿ (18) ಮೃತಪಟ್ಟವರು.

ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಪದ್ಮರಾಜ್ ವಿರುದ್ದ ಮಹಿಳಾ ಠಾಣೆಯಲ್ಲಿ ದೂರು ದಾಖಲು ಮಾಡಲು ಬರುತ್ತಿದ್ದ ವೇಳೆ ಗೌರಿ ಮೇಲೆ ಆರೋಪಿ ಪದ್ಮರಾಜ್ ಚೂರಿಯಿಂದ ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ. ಮೇಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಬಂದಿ ಪದ್ಮರಾಜ್ ಎಂಬಾತ ಮಾರಾಕಯುದ್ದದಿಂದ ಹಲವು ಬಾರಿ ದಾಳಿ ಮಾಡಿದ್ದ. ಬೈಕ್ ನಲ್ಲಿ ಬಂದಿದ್ದ ಆತ, ಕೃತ್ಯ ಎಸಗಿ ಬೈಕನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ತಕ್ಷಣ ಗಾಯಾಳು ಗೌರಿಯವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ತಂದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳುರಿನ ಖಾಸಗಿ ಆಸ್ಪತ್ರೆ ಮೂಲಕ ಕಳಹಿಸಿ ಕೊಡಲಾಯಿತು. ಆದರೆ ದಾರಿ ಮಧ್ಯೆ ಆಕೆ ಮೃತಪಟ್ಟಿರುವುದಾಗಿ ವರದಿಯಾಗಿದೆ ಗೌರಿಯವರು ಇತ್ತೀಚೆಗಷ್ಟೆ ಶಿಕ್ಷಣ ಮುಗಿಸಿ, ಪುತ್ತೂರಿನ ಬಸ್ಸು ನಿಲ್ದಾಣದ ಬಳಿ ಮಳಿಗೆಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದರು ಎನ್ನಲಾಗಿದೆ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೃತ್ಯ ನಡೆದ ಒಂದೂವರೆ ಗಂಟೆಯೊಳಗಡೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನವ ಮಾಹಿತಿ ಲಭ್ಯವಾಗಿದೆ. ಆರೋಪಿಯೂ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್’ ಎಂದು ತಿಳಿದು ಬಂದಿದೆ.
ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿ ಪದ್ಮರಾಜ್ ಮಾರಕಾಯುದ್ದದಿಂದ 3 ರಿಂದ ನಾಲ್ಕು ಬಾರಿ ಇರಿದು ಗಂಭಿರವಾಗಿ ಗಾಯಗೊಳಿಸಿದ್ದಾನೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಹಾಗೂ ಮಹಿಳಾ ಪೊಲೀಸ್ ಠಾಣೆಯ ನಡುವಿನ ಜಾಗದಲ್ಲಿ ಈ ದಾಳಿ ನಡೆದಿದೆ. ಗೋಡೆಗೆ ಯುವತಿಯನ್ನು ಒತ್ತಿ ಹಿಡಿದು ದುಷ್ಕರ್ಮಿ ಕತ್ತು ಸೀಳಿರುವುದಾಗಿ ಹೇಳಲಾಗುತ್ತಿದೆ