

ಕೊಡಗು ಜಿಲ್ಲಾ ಸಂಪಾಜೆ ವಲಯಾರಣ್ಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಅಸೈಗೋಳಿಯ ಮಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ.

ಆರೋಪಿ ಹಾಗೂ ಮರ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಸಂಪಾಜೆ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಒಟ್ಟು 12 ಹೆಬ್ಬಲಸು ಮರದ ದಿಮ್ಮಿಗಳು ಲಭ್ಯವಾಗಿವೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಕೈಗೊಳ್ಳಲಾಗಿದೆ ಮಡಿಕೇರಿ ವಿಭಾಗದ ಉಪ ಅರಣ್ಯ ,ಸಂರಕ್ಷಣಾಧಿಕಾರಿ ಪೂವಯ್ಯ.ಎ.ಟಿ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಗಳಾದ ಮೊಯಿಷಿನ್ ಬಾಷಾ ಹಾಗೂ ವಲಯ
ಅರಣ್ಯಾಧಿಕಾರಿ ಅನನ್ಯಕುಮಾರ್ ಮಾರ್ಗದರ್ಶನದಲ್ಲಿ ತನಿಖಾ ಠಾಣೆಯಲ್ಲಿ ಕಾರ್ಯನಿರತರಾಗಿದ್ದ ಉಪವಲಯ ಅರಣ್ಯಾಧಿಕಾರಿ ಬಸವರಾಜಪ್ಪ ಪ್ರಕರಣ ಪತ್ತೆ ಹಚ್ಚಿದರು ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿನಯಕೃಷ್ಣ ಎಂ.ಸಿ, ಗಸ್ತು ಅರಣ್ಯಪಾಲಕರಾದ ನಾಗರಾಜ್ ಎಸ್,ಕಾರ್ತಿಕ್ ವಾಹನ ಚಾಲಕರಾದ ಶಿವಪ್ರಸಾದ್, ಮನೋಜ್ ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.