ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಹೊರಡಿಸಿರುವ ಆದೇಶದ ಪ್ರತಿ ಲಭ್ಯವಾಗಿದೆ. ಸದ್ಯ ಅವರನ್ನು ಕೂಡಿಗೆಗೆ ವರ್ಗಾಯಿಸಲಾಗಿದೆ. “ಸಾರ್ವ ಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ” ತಕ್ಷಣದಿಂದ ಜಾರಿಗೆ ಬರುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಅವರು ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತಿಚೆಗೆ ಅವರು ರಜೆಯಲ್ಲಿ ತೆರಳಿದ್ದರು ಎಂದು ಹೇಳಲಾಗಿತ್ತು.

ರಾಜ್ಯ