

ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ.

ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಗಂಭೀರ ಗಾಯಗೊಂಡ ಕುದುರೆಯೂ ಬಳಿಕ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ
add a comment